ಅಭಿಪ್ರಾಯ / ಸಲಹೆಗಳು

ಜನ ಸಂಪರ್ಕ ಸಭೆ

ಗ್ರಾಹಕರ ಕುಂದುಕೊರತೆ ನಿವಾರಣೆಗಾಗಿ ಉಪವಿಭಾಗ ಮಟ್ಟದಲ್ಲಿ ಗ್ರಾಹಕ ಸಂವಾದ ಸಭೆ

 

ಮಾನ್ಯ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿರ್ದೇಶನದನ್ವಯ ತ್ರೈಮಾಸಿಕವಾಗಿ ಪ್ರತಿ ಉಪವಿಭಾಗ ಮಟ್ಟದಲ್ಲಿ ಹು.ವಿ.ಸ.ಕಂ. ಗ್ರಾಹಕರ ಕುಂದುಕೊರತೆಯನ್ನು ನಿವಾರಿಸುವ ಸಲುವಾಗಿ ಸಂಬಂಧಪಟ್ಟ ಅಧೀಕ್ಷಕ ಇಂಜಿನಿಯರ್(ವಿ)/ಕಾರ್ಯನಿರ್ವಾಹಕ ಇಂಜಿನಿಯರ್(ವಿ), ರವರ ಅಧ್ಯಕ್ಷತೆಯಲ್ಲಿ ಗ್ರಾಹಕ ಸಂವಾದ ಸಭೆಯನ್ನು ನಡೆಸಲಾಗುತ್ತಿದೆ. ಏರ್ಪಡಿಸಲಾಗುವ ಗ್ರಾಹಕ ಸಂವಾದ ಸಭೆಯ ದಿನಾಂಕ ಹಾಗೂ ಉಪವಿಭಾಗದ ವಿವರವನ್ನು ಮುಂಚಿತವಾಗಿ ಸ್ಥಳೀಯ ದೈನಂದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗುತ್ತಿದೆ.

 

ಗ್ರಾಹಕರು ವಿದ್ಯುತ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಹವಾಲುಗಳಿದ್ದಲ್ಲಿ ಸಭೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

 

ಅ. ಸುರಕ್ಷತೆಯ ವಿಷಯ.

ಆ. ಮಾಸಿಕ ವಿದ್ಯುತ್ ಬಿಲ್ ಗೆ ಸಂಬಂಧಿಸಿದ ದೂರು.

ಇ. ಕಡಿಮೆ ವೋಲ್ಟೇಜ್ (ಲೋ ವೋಲ್ಟೇಜ್) ಗೆ ಸಂಬಂಧಿಸಿದ ದೂರು.

ಈ. ವಿದ್ಯುತ್ ಜಾಲದಲ್ಲಿ ಅಪಾಯಕಾರಿ ಸ್ಥಳದ ಕುರಿತು ಮಾಹಿತಿ.

 

 

ಇದಲ್ಲದೇ, ಯಾವುದೇ ವಿದ್ಯುತ್ ಸಂಬಂಧಿಸಿದ ದೂರು/ಮಾಹಿತಿಗಳಿದ್ದಲ್ಲಿ ಸಹಾಯವಾಣಿ 1912ಗೆ ದೂರವಾಣಿ ಮೂಲಕ ಕರೆ ಮಾಡಬಹುದಾಗಿದೆ ಅಥವಾ ಸ್ಥಳೀಯ ಹೆಸ್ಕಾಂ ಕಛೇರಿಗೆ ಭೇಟಿ ನೀಡಬಹುದಾಗಿದೆ.

 

 

 

 

 

ಇತ್ತೀಚಿನ ನವೀಕರಣ​ : 21-12-2022 10:49 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080